ದಿನಾಂಕ
07-07-2026 ರಂದು ನಗರದ
ದೈವಜ್ಞ ಸಮುದಾಯ ಭವನದಲ್ಲಿ ಪ್ರತಿಷ್ಠಿತ ಮಹಾವಿದ್ಯಾಲಯಗಳಲ್ಲಿ ಒಂದಾದ ಅರ್ಜುನ ವಿಜ್ಞಾನ ಪದವಿ
ಪೂರ್ವಮಹಾವಿದ್ಯಾಲಯ, ಧಾರವಾಡ 2026-27 ನೇ
ಸಾಲಿನ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳ ಸ್ವಾಗತ ಹಾಗೂ ಕ್ರೀಡಾ, ಸಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ
ಮತ್ತು ಸಾಧನೆ ಮಾಡಿದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು
ಪ್ರಾರ್ಥನೆಯೊಂದಿಗೆ ಪ್ರಾರಂಭಿಸಲಾಯಿತು.ವೇದಿಕೆ ಮೇಲೆ ಉಪಸ್ಥಿತರಿದ್ದ ಗಣ್ಯಮಾನ್ಯರಿಗೆ ಹಾಗೂ ಅತಿಥಿಗಳಿಗೆ ನಮ್ಮ ಮಹಾವಿದ್ಯಾಲಯದ ಪ್ರಾಚಾರ್ಯರಾದ ಶ್ರೀ ಸಂತೋಷ ಹಂಚಾಟೆ ಇವರು ಸ್ವಾಗತ ಕೋರಿದರು
ಹಾಗೂ ಪ್ರಾಸ್ತಾವಿಕ ನುಡಿಗಳನ್ನಾಡಿದರು.ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ವ್ಯಕ್ತಿತ್ವ ವಿಕಸನ ತಜ್ಞ
,ಧಾರವಾಡ ಐ.ಐ.ಟಿ ಪ್ರಾಧ್ಯಾಪಕರಾದ ಪ್ರೊ.ಎಸ್.ಎಂ ಶಿವಪ್ರಸಾದ ಇವರ ಪರಿಚಯವನ್ನು ಕಾರ್ಯಕ್ರಮದ ಅಧ್ಯಕ್ಷರಾದ ಶ್ರೀ ಶಿವರಾಂ ಸುಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ
ಉಪನಿರ್ದೇಶಕಿ ಡಾ.ತೇಜಸ್ವಿನಿ ನಾರಾಯಣಕರ ಇವರ ಪರಿಚಯವನ್ನು ಶ್ರೀ ಸೂರ್ಯಕಾಂತ ಶೇಟ್ ಮಾಡಿದರು
ಈ ಕಾರ್ಯಕ್ರಮದ ಉದ್ಘಾಟಕರು ಹಾಗೂ ಮುಖ್ಯ ಅತಿಥಿಗಳಾದ ಪ್ರೊ,ಎಸ್,ಎಮ್ ಶಿವಪ್ರಸಾದರವರು ಸಸಿಗಳಿಗೆ ನೀರು ಹಾಕುವದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಕುರಿತು ನವ ಭಾರತ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ಬದಲಾಗುತ್ತಿರುವ ಆಧುನಿಕತೆಯಲ್ಲಿ ತಂತ್ರಜ್ಞಾನದ ಬಳಕೆ ಹಾಗೂ ವಿದ್ಯಾರ್ಥಿಯ ಭವಿಷ್ಯದಲ್ಲಿ ವ್ಯಕ್ತಿತ್ವ ನಿರ್ಮಾಣದ ಜೊತೆಗೆ ತಂತ್ರಜ್ಞಾನದ ಬಳಕೆ ಅವಕಾಶಗಳ ಸದುಪಯೋಗ ಕುರಿತು ವಿವರಿಸಿದರು. ವಿದ್ಯಾರ್ಥಿಗಳು ಉನ್ನತ ಸ್ಥಾನನದೊಂದಿಗೆ ನಿಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ಮನ ಮುಟ್ಟುವಂತೆ ಮಾತನಾಡಿದರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಡಾ.ತೇಜಸ್ವಿನಿ ನಾರಾಯಣಕರ ಅವರು ವಿದ್ಯಾರ್ಥಿಗಳು ಸಾಧನೆ ಮಾಡುವಲ್ಲಿ ಶಿಕ್ಷಕರ ಮಾರ್ಗದರ್ಶನ ಜೊತೆಗೆ ವಿದ್ಯಾರ್ಥಿಗಳ ಸತತ ಪರಿಶ್ರಮ ಮುಖ್ಯ ಎಂದು ಸಂಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು,ಇದೇ ಸಂದರ್ಭದಲ್ಲಿ ಮಹಾವಿದ್ಯಾಲಯದ ವೆಬ್ ಸೈಟ್ ಹಾಗೂ ಲಾಂಛನ ಅನಾವರಣಗೊಳಿಸಲಾಯಿತು, ಮಹಾವಿದ್ಯಾಲಯದ ಆಡಳಿತ ಮಂಡಳಿ ಹಾಗೂ ಗಣ್ಯ ಮಾನ್ಯರಿಂದ ಬಂದ ಅತಿಥಿಗಳಿಗೆ ಸನ್ಮಾನ ಮಾಡಲಾಯಿತು. ಶ್ರೀ ಸಂತೋಷ ಭಟ್ ಇವರು ಸಂಸ್ಥೆಯ ಫಲಿತಾಂಶ ಹಾಗೂ ವಿದ್ಯಾರ್ಥಿಗಳ ಸಾಧನೆ ಕುರಿತು ವಿವರಿಸಿದರು. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಿ ಯು ಸಿ, ಸಿ ಇ.ಟಿ, ಜೆ ಇ ಇ,ಯಲ್ಲಿ ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು.ನಂತರ ವಿದ್ಯಾರ್ಥಿಗಳು ಸಂಸ್ಕ್ರತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು,ಎಲ್ಲ ಶಿಕ್ಷಕ,ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು,ಪಾಲಕರು ಉಪಸ್ಥಿತರಿದ್ದರು. ಕು.ಶ್ರೇಯಾ ಇಟಗಿ ಹಾಗೂ ಕು.ತ್ರೀಶಾ ಕಾರ್ಯಕ್ರಮದ ನಿರೂಪಣೆಯನ್ನು ಸೃಜನ ಸುಲಾಖೆ ವಂದನಾರ್ಪಣೆಯನ್ನು ಮಾಡಿದರು.
